*🌻ದಿನಕ್ಕೊಂದು ಕಥೆ🌻 ನುಡಿದರೆ ಮಾಣಿಕ್ಯದ ದೀಪ್ತಿ!*
ಮಾಣಿಕ್ಯದ ದೀಪ್ತಿಯಂಥ ಮೂರು ಮಾತುಗಳಿಂದ ಕಳ್ಳನೊಬ್ಬನ ಬದುಕು ಬದಲಾದ ಪವಾಡಸದೃಶ ಜೆನ್ ಕತೆಯೊಂದು ಇಲ್ಲಿದೆ! ಶತಮಾನಗಳ ಹಿಂದೆ ಜಪಾನಿನಲ್ಲಿ ಒಬ್ಬ ಜೆನ್ ಗುರುಗಳಿದ್ದರು. ಸಣ್ಣದೊಂದು ಕುಟೀರದಲ್ಲಿ ವಾಸವಿದ್ದವರು. ಸದಾ ಅಧ್ಯಯನ ಮತ್ತು ಧ್ಯಾನಮಗ್ನರು. ಒಂದು ರಾತ್ರಿ ಅವರು ಅಧ್ಯಯನದಲ್ಲಿದ್ದಾಗ ಕುಟೀರದೊಳಕ್ಕೆ ಒಬ್ಬ ಕಳ್ಳ ನುಗ್ಗಿದ. ಆತ ಕೈಯಲ್ಲಿದ್ದ ಕತ್ತಿಯಿಂದ ಗುರುಗಳ ಎದೆಗೆ ತಾಕಿಸಿ ‘ನಿಮ್ಮಲಿರೋ ಹಣವನ್ನೆಲ್ಲ ಕೊಟ್ಟುಬಿಡಿ. ಇಲ್ಲದಿದ್ದರೆ ನಿಮ್ಮನ್ನು ಕೊಂದು ಹಾಕುತ್ತೇನೆ’ ಎಂದು ಅಬ್ಬರಿಸಿದ. ಗುರುಗಳು ಪುಸ್ತಕದಿಂದ ತಲೆಯೆತ್ತಿ ನೋಡಲಿಲ್ಲ. ಶಾಂತವಾದ ದನಿಯಲ್ಲಿ ‘ತಮ್ಮಾ! ನಿನಗೆ ಕಾಣುವುದಿಲ್ಲವೇ? ನಾನು ಓದಿನಲ್ಲಿ ಮಗ್ನನಾಗಿದ್ದೇನೆ.
ನಿನಗೆ ಬೇಕಿರುವುದು ಹಣವಲ್ಲವೇ? ಆ ಮೇಜಿನ ಮೇಲೆ ಹಣವಿದೆ. ಅದನ್ನು ತೆಗೆದುಕೊಂಡು ಹೋಗು. ನನ್ನ ಓದಿಗೆ ಭಂಗ ತರಬೇಡ’ ಎಂದರು. ಆಶ್ಚರ್ಯಗೊಂಡ ಕಳ್ಳ ಕತ್ತಿಯನ್ನು ಎತ್ತಿಟ್ಟುಕೊಂಡ. ಮೇಜಿನ ಮೇಲಿದ್ದ ನಾಣ್ಯಗಳನ್ನೆಲ್ಲಾ ಬಾಚಿಕೊಂಡ. ಆಗಲೂ ಗುರುಗಳು ತಲೆಯೆತ್ತದೆಯೇ ‘ಎಲ್ಲವನ್ನೂ ತೆಗೆದುಕೊಂಡು ಹೋಗಬೇಡಯ್ಯಾ. ನಾಳೆ ನನಗೆ ಕಂದಾಯ ಕಟ್ಟಬೇಕಿದೆ. ಅದಕ್ಕೆ ಹತ್ತು ನಾಣ್ಯಗಳು ಬೇಕು. ಅಷ್ಟನ್ನು ಅಲ್ಲಿಟ್ಟು ಉಳಿದುದನ್ನು ತೆಗೆದುಕೊಂಡು ಹೋಗು. ನಾನೇ ಅದನ್ನು ನಿನಗೆ ಕೊಡುತ್ತಿದ್ದೇನೆಂದು ತಿಳಿದುಕೋ’ ಎಂದರು.
ಕಳ್ಳನಿಗೆ ಮತ್ತೂ ಆಶ್ಚರ್ಯ. ಕತ್ತಿಗೆ ಹೆದರದ, ಮಾಡುತ್ತಿದ್ದ ಕೆಲಸದಿಂದ ವಿಮುಖರಾಗದ, ಕಳ್ಳನಿಗೂ ಧಾರಾಳವಾಗಿ ಕೊಡುವ, ನಾಳೆ ಕಟ್ಟಬೇಕಾಗಿದ್ದ ಕಂದಾಯದ ಜವಾಬ್ದಾರಿಯನ್ನೂ ಮರೆಯದ ಇಂಥ ವ್ಯಕ್ತಿಯನ್ನು ಕಳ್ಳ ತನ್ನ ಜೀವಮಾನದಲ್ಲೇ ಕಂಡಿರಲಿಕ್ಕಿಲ್ಲ. ಆಶ್ಚರ್ಯದಿಂದ ಆತ ಮೂಕನಾಗಿಬಿಟ್ಟಿದ್ದ! ಆತ ನಿಶ್ಶಬ್ದವಾಗಿ ನಾಣ್ಯಗಳನ್ನು ಎತ್ತಿಕೊಂಡು ಹೊರಟ. ಆಗ ಗುರುಗಳು ಅವನತ್ತ ತಲೆಯೆತ್ತಿ ನೋಡದೆಯೇ ‘ನೀನು ಕಳ್ಳನಿರಬಹುದು. ಆದರೆ ಯಾರಾದರು ಏನನ್ನಾದರು ಕೊಟ್ಟಾಗ ಅವರಿಗೆ ಧನ್ಯವಾದಗಳನ್ನು ಹೇಳುವ ಸಭ್ಯತೆ ಕಲಿತುಕೋ. ನಾನೀಗ ನನ್ನೆಲ್ಲಾ ನಾಣ್ಯಗಳನ್ನು ಕೊಟ್ಟಿದ್ದೇನೆ. ಧನ್ಯವಾದಗಳನ್ನು ಹೇಳಿ ಹೋಗು’ ಎಂದರು. ಕಳ್ಳ ತಡವರಿಸುತ್ತ ‘ಧ..ಧ..ಧನ್ಯವಾದಗಳು..’ ಎಂದು ಹೇಳಿ ಅಲ್ಲಿಂದ ಕಾಲ್ಕಿತ್ತ!
ಆದರೆ ಅದಾದ ಸ್ವಲ್ಪ ದಿನಗಳಲ್ಲಿ ಕಳ್ಳ ರಾಜಭಟರ ಕೈಗೆ ಸಿಕ್ಕಿಬಿದ್ದ. ಕದ್ದ ಮಾಲುಗಳೊಂದಿಗೆ ಆತನನ್ನು ನ್ಯಾಯಾಲಯದಲ್ಲಿ ಹಾಜರು ಪಡಿಸಲಾಯಿತು. ನ್ಯಾಯಾಲಯದಲ್ಲಿ ಸಾಕ್ಷಿ ನುಡಿಯಲು ಕಳ್ಳನು ಎಲ್ಲೆಲ್ಲಿ ಕಳ್ಳತನ ಮಾಡಿದ್ದನೋ ಆ ಮನೆಗಳವರನ್ನೆಲ್ಲಾ ಕರೆಸಲಾಗಿತ್ತು. ಹಾಗೆಯೇ ಜೆನ್ ಗುರುಗಳನ್ನೂ ಕರೆಸಲಾಗಿತ್ತು. ನ್ಯಾಯಾಲಯದಲ್ಲಿ ಒಂದೊಂದು ಮನೆಯವರೂ ಕಳ್ಳನ ವಿರುದ್ಧ ಬಲವಾದ ಸಾಕ್ಷ್ಯಗಳನ್ನು ಹೇಳಿದರು. ಗುರುಗಳ ಸರತಿ ಬಂದಾಗ ಅವರು ‘ಆತ ನನ್ನಿಂದ ಏನೂ ಕದಿಯಲಿಲ್ಲ. ನಾನೇ ಆತನಿಗೆ ಹಣವನ್ನು ಕೊಟ್ಟೆ.
ಆತ ಅದನ್ನು ಸ್ವೀಕರಿಸಿ ನನಗೆ ಧನ್ಯವಾದಗಳನ್ನೂ ಹೇಳಿ ಹೋದ’ ಎಂಬ ಮೂರೇ ಮಾತುಗಳ ಸಾಕ್ಷ್ಯ ಹೇಳಿದರು. ಅದರೆ ಉಳಿದ ಮನೆಯವರು ಹೇಳಿದ ಸಾಕ್ಷಿಗಳ ಆಧಾರದಲ್ಲಿ ಕಳ್ಳನಿಗೆ ಶಿಕ್ಷೆಯಾಯಿತು. ಆತ ಸೆರೆಮನೆಗೆ ದೂಡಲ್ಪಟ್ಟ. ಈ ಕತೆ ಇಲ್ಲಿಗೆ ಮುಗಿಯಲಿಲ್ಲ! ಕತೆಗೊಂದು ವಿಚಿತ್ರ ತಿರುವು ಬರುವುದು ಈಗ! ಸೆರೆಮನೆಯ ಶಿಕ್ಷೆ ಅನುಭವಿಸಿ, ಮುಗಿಸಿದ ನಂತರ ಕಳ್ಳ ಓಡಿ ಬಂದದ್ದು ಎಲ್ಲಿಗೆ ಗೊತ್ತೆ? ಆತ ಜೆನ್ ಗುರುಗಳ ಆಶ್ರಮಕ್ಕೆ ಧಾವಿಸಿದ. ಗುರುಗಳಿಗೆ ಶರಣಾದ. ತನ್ನ ಬದುಕನ್ನು ಬದಲಾಯಿಸಿಕೊಳ್ಳಲು ಗುರುಗಳ ಸಹಾಯ ಕೇಳಿಕೊಂಡ. ಗುರುಗಳು ಆತನನ್ನು ಶಿಷ್ಯನನ್ನಾಗಿ ಸ್ವೀಕರಿಸಿದರು.
ಆತನಿಗೆ ಶಿಷ್ಯತ್ವದ ದೀಕ್ಷೆ ಕೊಟ್ಟರು. ಧರ್ಮದ ಬೋಧನೆ ಮಾಡಿದರು. ಹಲವಾರು ವರ್ಷಗಳ ಸಾಧನೆಯ ನಂತರ ಆತನೂ ಒಬ್ಬ ಜೆನ್ ಭಿಕ್ಷುವಾಗಿಬಿಟ್ಟ! ನೂರಾರು ಕಾನೂನುಗಳೂ, ಸೆರೆಮನೆಯ ಶಿಕ್ಷೆಗಳೂ ತರಲಾಗದ ಬದಲಾವಣೆಗಳನ್ನು ಒಬ್ಬ ಕರುಣಾಮಯಿ ಗುರುಗಳ ಮೂರು ಮಾಧುರ್ಯ ತುಂಬಿದ ಮಾತುಗಳು ತಂದಿದ್ದವು! ನುಡಿದರೆ ಮುತ್ತಿನ ಹಾರ! ನುಡಿದರೆ ಮಾಣಿಕ್ಯದ ದೀಪ್ತಿ! ಎನ್ನುವ ವಚನ ನೆನಪಾಗುತ್ತದಲ್ಲವೇ!
ಕೃಪೆ: ಅಂತರ್ಜಾಲ.
ಹೆಚ್ಚೆಚ್ಚು ಖಾರ ಪದಾರ್ಥ ತಿನ್ನಿ ನಿಮ್ಮ ಆಯಸ್ಸು ವೃದ್ಧಿ ಮಾಡಿಕೊಳ್ಳಿ.!Spicy foods...
ದೀರ್ಘಾವಧಿಯ ಜೀವನಕ್ಕೆ ಸಂಬಂಧಿಸಿದ ಮಸಾಲೆಯುಕ್ತ ಆಹಾರಗಳು, ಹಾರ್ವರ್ಡ್ ಸಂಶೋಧಕರು ಕಂಡುಕೊಂಡಿದ್ದಾರೆ ನೀವು ದೀರ್ಘಕಾಲ ಬದುಕಲು ನೀವು ನುಂಗಲು ಯಾವುದೇ ಮ್ಯಾಜಿಕ್ ಮಾತ್ರೆ...
-
ಈ ಯೋಗಾಸನಗಳನ್ನು ಮಾಡಿದರೆ, ಆಗ ಕೈಯಲ್ಲಿ ಕೆಟ್ಟದಾಗಿ ಬೆಳೆದಿರುವ ಕೊಬ್ಬನ್ನು ಸರಿಯಾದ ರೀತಿಯಲ್ಲಿ ಕರಗಿಸಬಹುದು. ಕೈಗಳ ತೋಳಿನ ಕೊಬ್ಬನ್ನು ಕರಗಿಸುವ ಯೋಗ ಭಂಗಿಗಳು ದೇಹ...
-
ಒಂದು ಕಾಲದಲ್ಲಿ ಅಭಿವೃದ್ಧಿ ಹೊಂದುತ್ತಿರುವ ನಗರ ಈಗ ಅಸ್ಪಷ್ಟ ಹಳ್ಳಿಯಾಗಿದೆ ಬನವಾಸಿ, ಬಾದಾಮಿ, ಐಹೊಳೆ, ಪಟ್ಟದಕಲ್ಲು, ಹಳೇಬೀಡು ಮತ್ತು ಬೇಲೂರು, ಸೋಮನಾಥಪುರ, ಮಾನ್ಯಖೇ...
-
ಶ್ರೀವಿಜಯನು, ಕನ್ನಡದ ಮೊಟ್ಟ ಮೊದಲ ಆಧಾರಗ್ರಂಥವಾಗಿರುವ 'ಕವಿರಾಜಮಾರ್ಗ'ದ ಕರ್ತೃವಾಗಿದ್ದಾನೆ. ಕವಿರಾಜಮಾರ್ಗದ ಕರ್ತೃ ಯಾರೆಂಬ ಚರ್ಚೆಯು ನಡೆಯುತ್ತಿತ್ತು. ಇತ್ತ...
-
ಹೊಟ್ಟೆಯ ಕೊಬ್ಬಿನಿಂದ ಬಳಲುತ್ತಿದ್ದೀರಾ? ಅದನ್ನು ಕಳೆದುಕೊಳ್ಳಲು ಈ ಸರಳ ಸಲಹೆಯನ್ನು ಅನುಸರಿಸಿ ಹೊಟ್ಟೆಯ ಸುತ್ತ ಹೆಚ್ಚಿನ ಕೊಬ್ಬು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನ...
-
ಕುಸುಮಬಾಲೆ - ದೇವನೂರು ಮಹಾದೇವ | Kusumabaale by Devanuru Mahadeva ದೇವನೂರು ಮಹಾದೇವರವರ ಮನಮುಟ್ಟುವ ಕುಸುಮಬಾಲೆ ಕಾದಂಬರಿ. ಹಿರಿಯ ಸಾಹಿತಿ ದೇವನೂರು ಮಹಾದೇವರವರ...
-
🙏🏼🙏🏼ಹೃದಯ ಸಿರಿವಂತಿಕೆ🙏🏼🙏🏼 ಸುಮಾ ಹಾಗೂ ಪ್ರಿಯಾ ಇಬ್ಬರೂ ಒಂದೇ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾರೆ. ಇಬ್ಬರೂ ಹೋಟೆಲಿನ ಒಂದೇ ರೂಮಿನಲ್ಲಿ ವಾಸ ಮಾಡುತ್ತಿದ್...
-
Fitness Tipss: ತೂಕ ಇಳಿಸಿಕೊಳ್ಳಲು ಸರ್ಕಸ್ ಮಾಡ್ಬೇಡಿ; ರಾತ್ರಿ ಹೊತ್ತು ಈ ಪಾನೀಯಗಳನ್ನು ಕುಡಿಯಿರಿ ಸಾಕು! ಇಂತಹ ವೇಳೆ ನಾವು ದೈನಂದಿನ ಜೀವನದಲ್ಲಿ ಕೆಲವು ತಪ್ಪುಗಳನ...
-
ಈ ಋತುವಿನಲ್ಲಿ ಕೀಲು ನೋವುಗಳನ್ನು ಪರಿಣಾಮಕಾರಿಯಾಗಿ ನಿವಾರಿಸಲು 5 ನೈಸರ್ಗಿಕ ಮಾರ್ಗಗಳು! ಕೀಲುಗಳು, ನಮ್ಮ ದೇಹದಲ್ಲಿನ ಮೂಳೆಗಳ ಸಭೆಯ ಬಿಂದುಗಳು, ಅವುಗಳ ವಿವಿಧ ಆಕಾರಗ...
-
ರಚನೆ : ಡಾ || ದ.ರಾ.ಬೇಂದ್ರೆ | ಅಂಬಿಕಾತನಯದತ್ತ Here you fill enjoy Da Ra Bendre bhavageethe lyrics in Kannada. Da.Ra.Bendre Poems – Shravana ...
-
Goddess Lakshmi: ಶ್ರೀಮಂತರಾಗಬೇಕಾದರೆ ಲಕ್ಷ್ಮಿ ದೇವಿ ನೆಲೆಸಿರುವ ಈ ಸ್ಥಳಗಳಿಗೆ ಹೋಗಿ.! Lakshmi Blessings: ಲಕ್ಷ್ಮಿ ದೇವಿಯು ಯಾವ ಸ್ಥಳಗಳಲ್ಲಿ ನೆಲೆಸಿರುತ್ತ...